Latest updates and articles in politics category
ಇಂದಿನಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ರಾಜ್ಯಪಾಲರ ಭಾಷಣ ಹಾಗೂ ಮುಂದಿನ ನಡೆ ಕುರಿತಾಗಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಇತ್ತೀಚೆಗೆ ಉಂಟಾದ ಅಭಿಪ್ರಾಯ ಬೇಧಗಳ ಹಿನ್ನೆಲೆ, ಅಧಿವೇಶನದಲ್ಲಿ ನಡೆಯುವ ಪ್ರತಿಯೊಂದು ಬೆಳವಣಿಗೆಯು ಮಹತ್ವ ಪಡೆದುಕೊಂಡಿದೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ, ವಿರೋಧ ಪಕ್ಷಗಳ ಪ್ರತಿಕ್ರಿಯೆ ಹಾಗೂ ಸರ್ಕಾರದ ನಿಲುವುಗಳು ಈ ಅಧಿವೇಶನದ ಪ್ರಮುಖ ಆಕರ್ಷಣೆಯಾಗಿವೆ.
ಇಂದು ವಿಶೇಷ ಅಧಿವೇಶನಕ್ಕಾಗಿ ಮಂಡಿಸಬೇಕಾದ ಭಾಷಣದಲ್ಲಿ ಕೆಲ ಸಾಲುಗಳ ಬದಲಾವಣೆಗೆ ನಿರ್ಧಾರವನ್ನು ರಾಜ್ಯಪಾಲರು ಒಪ್ಪದಿದ್ದರೆ ಸರ್ಕಾರ ಕಾನೂನು ಹೋರಾಟ ಮಾಡುವುದಾಗಿ ಸ್ಪಷ್ಟಪಡಿಸಿದೆ. ಇದರಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷ ಶುರುವಾದ ಹಾಗೇ ಕಾಣುತ್ತಿದೆ.
ವರ್ಷದ ಮೊದಲ ವರ್ಷದ ಜಂಟಿ ಅಧಿವೇಶದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣವನ್ನು ಅರ್ಧದಲ್ಲೇ ನಿಲ್ಲಿಸಿ ಹೊರಟರು ಅದರಿಂದ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿ ರಾಜ್ಯಪಾಲರ ವಿರುದ್ಧ ಗುಡುಗಿದರು.
ದಾವೋಸ್ ನಲ್ಲಿ ನಡೆದ ಅಂತರಾಷ್ಟ್ರೀಯ ಆರ್ಥಿಕ ಪೋರಂನಲ್ಲಿ ಕರ್ನಾಟಕ ರಾಜಕೀಯ ಗಮನಸೆಳೆಯುತ್ತಿದೆ. ಮುಖ್ಯ ಚರ್ಚೆಯ ಕೇಂದ್ರವಾಗಿರುವುದು ಸಿಎಂ ಕುರ್ಚಿ ಹೋರಾಟ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ತೀವ್ರತೆ ಮತ್ತು ಪಕ್ಷಗಳ ಮಧ್ಯೆ ತೀವ್ರಸ್ ಸ್ಪರ್ಧೆ.
ನರೇಗಾ ಬಗ್ಗೆ ಜನೇವರಿ ೨೨ ರಿಂದ ೩೧ರ ವರೆಗೆ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆಯನ್ನು ನಡೆಸುವುದಾಗಿ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರರವರು ಅಕ್ರಮ ಹಣ ವರ್ಗಾವಣೆ ಪ್ರಕರಣ ತಮ್ಮ ವಿರುದ್ಧ ತನಿಖೆಯನ್ನು ನಿಲ್ಲಿಸಬೇಕು ಎಂದು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಮುಂದೂಡಲಾಗಿದೆ.
ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಆಯೋಗವು ಪರಿಶಿಷ್ಟ ಜಾತಿ ಒಳಮೀಸಲಾತಿಯ ವರ್ಗಿಕರಣದಲ್ಲಿ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುಧಾಯಗಳಿಗೆ ಆಗುತ್ತಿರುವ ಅನ್ಯಾಯಗಳ ಪರಿಹರಿಸಲು ಮಂಗಳವಾರ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದರು.
ಬಡವರು ದುಡಿದು ಸಂತೋಷವಾಗಿರುವುದನ್ನು ಬಿಜೆಪಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಮಧು ಬಂಗಾರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಜನಪರ ಯೋಜನೆಗಳಿಂದ ಬಡವರ ಬದುಕು ಸುಧಾರಿಸುತ್ತಿದ್ದು, ಅಧಿಕಾರಕ್ಕೆ ಬಿಜೆಪಿ ನಾಯಕರು ಹೊಟ್ಟೆ ಉರಿ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ರೇವಣ್ಣನ ಹೇಳಿಕೆಗೆ ಕುಮಾರಸ್ವಾಮಿ ಇದ್ದಕ್ಕಿದ್ದಂತೆ ಕೋಪಗೊಂಡ ಘಟನೆ ಗಮನ ಸೆಳೆಯುತ್ತಿದೆ. ರಾಜಕೀಯ ವಾತಾವರಣದಲ್ಲಿ ತೀವ್ರ ಪ್ರತಿಕ್ರಿಯೆ ಉಂಟಾಗಿದ್ದು, ಎರಡು ನಾಯಕರ ನಡುವಿನ ಸಮಾಲೋಚನೆ ಮತ್ತು ಸಂವಹನದ ಕುರಿತು ಪ್ರಜೆಗಳು ಚರ್ಚೆ ಮಾಡುತ್ತಿದ್ದಾರೆ. ಈ ಘಟನೆ ರಾಜಕೀಯ ಬೆಳವಣಿಗೆಗೆ ಏನು ಪರಿಣಾಮ ಬೀರುತ್ತದೆ ಎಂಬುದನ್ನು ಈ ವರದಿಯಲ್ಲಿ ವಿವರಿಸಲಾಗಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದಲ್ಲಿ ಯಾವುದೇ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಶಿಸ್ತಿಗೆ ದಕ್ಕಿಯಾಗುವ ಯಾವುದೇ ಘಟನೆ ನಡೆದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದರು.
ಡಿಕೆ ಸುರೇಶ್ ರಾಜಕೀಯದಲ್ಲಿ ಯಾರಿಗೂ ಅಧಿಕಾರವು ಶಾಶ್ವತವಲ್ಲ ಮತ್ತು ಹೆಚ್ಚು ತಾಳ್ಮೆಯೂ ಶಾಶ್ವತವಾಗಿ ಇರುವುದಿಲ್ಲ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ರವರು ಸದಾಶಿವ ನಗರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
ಬಿಜೆಪಿಯ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪಕ್ಷದ ಉನ್ನತ ನಾಯಕ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದು ಮುಂದಿನ ದಿನಗಳಲ್ಲಿ ಪಕ್ಷವನ್ನು ಹೊಸ ದಿಕ್ಕಿನಲ್ಲಿ ಮುನ್ನಡೆಸುವ ನಿರೀಕ್ಷೆ ಮೂಡಿದೆ. ಈ ನೇಮಕ ಬಿಜೆಪಿ ರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಕಾಣುತ್ತಿದೆ.
ಇಂದು ಕೇರಳಾದ ವಿಧಾನ ಸಭೆಯ ೧೬ ಅಧಿವೇಶ ನಡೆಯುತ್ತಿದ್ದು, ಅಧಿವೇಶನದಲ್ಲಿ ರಾಜಪಾಲರು ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರವರು ಮಾತನಾಡುತ್ತಾ ಕೇಂದ್ರ ಸರ್ಕಾರದ ಹಣಕಾಸು ನೀತಿಯನ್ನು ಪ್ರಶ್ನಿಸಿದರು ಮತ್ತು ಕೇರಳಸರ್ಕಾರವನ್ನು ಹೊಗಳಿದರು.
ರಾಜ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಧರ್ಮಗಳಿಗಿಂತಲೂ ಮಾನವ ಧರ್ಮವೇ ಮೇಲು ಎಂದು ಸ್ಪಷ್ಟವಾಗಿ ಹೇಳಿದರು. ಸಮಾಜದಲ್ಲಿ ಶಾಂತಿ ಸಹ ಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮಾನವೀಯ ಮೌಲ್ಯಗಳು ಮೂಲ ಎಂದು ಅವರು ಒತ್ತಿ ಹೇಳಿದರು. ಸಿದ್ದರಾಮಯ್ಯನವರು ಹೀಗೆ ಎನ್ನಲು ಕಾರಣವೇನು ನೋಡೋಣ ಬನ್ನಿ..
ಕುಪ್ಯಾ ಗ್ರಾಮದಲ್ಲಿ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ಮಾತನಾಡುವಾಗ ನಾನು ಜೀವ ಇರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ ಎಂದು ಸಿದ್ದರಾಮಯ್ಯನವರು ಹೇಳಿದರು.
ಭಾನುವಾರದಂದು ನಡೆದ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿರುವಾಗ ಟಿಎಂಸಿ ನುಸುಳುಕೋರರರಿಗೆ ಸಹಾಯಮಾಡುತ್ತಿದೆ ದೇಶದ ಭದ್ರತೆಯೊಂದಿಗೆ ಆಟವಾಡುತ್ತಿದೆ ಎಂದು ಮೋದಿಯವರು ಕಿಡಿಕಾರಿದರು.
Get the latest politics news directly in your inbox
© H16news.online . All Rights Reserved. Designed by H16news.online