<?= $pageTitle ?>
Logo
ಮುಖಪುಟ ಓದುವುದು ಕೇಳು
Education

SSLC ವಿದ್ಯಾರ್ಥಿಗಳಿಗೆ ದೊಡ್ಡ ಸುದ್ದಿ: ಟಾಪರ್ ಗಳಿಗೆ ಲ್ಯಾಪ್ ಟಾಪ್ ಬದಲು ನಗದು ಬಹುಮಾನ

SSLC ವಿದ್ಯಾರ್ಥಿಗಳಿಗೆ ದೊಡ್ಡ ಸುದ್ದಿ:  ಟಾಪರ್ ಗಳಿಗೆ ಲ್ಯಾಪ್ ಟಾಪ್ ಬದಲು ನಗದು ಬಹುಮಾನ
Summary: SSLC ಪರೀಕ್ಷೆಯಲ್ಲಿ ಟಾಪರ್ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಇನ್ಮುಂದೆ ಲ್ಯಾಪ್ ಟಾಪ್ ಬದಲು ನಗದು ಬಹುಮಾನ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರೋತ್ಸಾಹಕಾಗಿ ಜಾರಿಗೆ ಬರಲಿರುವ ಈ ಹೊಸ ಬಹುಮಾನ ನೀತಿಯಿಂದ SSLC ಟಾಪರ್ ವಿದ್ಯಾರ್ಥಿಗಳಿಗೆ ನೇರ ಆರ್ಥಿಕ ನೇರವೂ ಲಭ್ಯವಾಗಲಿದೆ. ಸರ್ಕಾರದ ಈ ತೀರ್ಮಾನಕ್ಕೆ ವಿದ್ಯಾರ್ಥಿಗಳು ಹಾಗೂ ಪಾಲಕರು ಸ್ವಾಗತ ವ್ಯಕ್ತಪಡಿಸಿದ್ದು SSLC ಫಲಿತಾಂಶ ಮತ್ತು ಟಾಪರ್ ಬಹುಮಾನ ಯೋಜನೆ.
belagavi news :

SSLC ಟಾಪರ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಬದಲು ನಗದು ಬಹುಮಾನ ಸರ್ಕಾರದ ಮಹತ್ವದ ತೀರ್ಮಾನ ;
SSLCಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿ ಜಿಲ್ಲಾಮಟ್ಟದಲ್ಲಿ ಟಾಪರ್ ಗಳಾಗಿ ಹೊರಹೊಮ್ಮಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಯೋಜನೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ, ಇನ್ನು ಮುಂದೆ ಲ್ಯಾಪ್ ಟಾಪ್ ಬದಲಾಗಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ.



ಈ ಹೊಸ ನಿರ್ಧಾರದಂತೆ ಪ್ರತಿ ಟಾಪರ್ ವಿದ್ಯಾರ್ಥಿಗೆ ತಲಾ ₹ 50,000 ನಗದು ಬಹುಮಾನ ನೀಡಲಾಗುತ್ತದೆ. ವಿದ್ಯಾರ್ಥಿಗಳ ಅಗತ್ಯಕ್ಕೆ ಅನುಗುಣವಾಗಿ ಶಿಕ್ಷಣ ಸ್ಪರ್ಧಾತ್ಮಕ ಪರೀಕ್ಷೆಗಳು ಅಥವಾ ಮುಂದಿನ ಅಧ್ಯಯನಕ್ಕಾಗಿ ಹಣವನ್ನು ಬಳಸಿಕೊಳ್ಳಲು ಈ ಕ್ರಮ ಸಹಕಾರಿಯಾಗಲಿದೆ.


ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಲವಚಿಕತೆ ನೀಡುವ ಉದ್ದೇಶದಿಂದ ಈ ತೀರ್ಮಾನನ ಕೈಗೊಳ್ಳಲಾಗಿದೆ ಎಂದು ಸೂಚನೆ ಇಲಾಖೆ ತಿಳಿಸಿ ದ್ದು , SSLC ಟಾಪರ್ ಬಹುಮಾನ ಯೋಜನೆಯಲ್ಲಿ ಈ ಬದಲಾವಣೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.




ಬೆಂಗಳೂರಿನಲ್ಲಿ ಜನವರಿ 24ರಂದು ರಾಜ್ಯ ಸರ್ಕಾರ ಇನ್ನು ಮುಂದೆ ಎಸ್ಎಲ್ಸಿ ಟಾಪರ್ ಗಳಿಗೆ ಲ್ಯಾಪ್ ಟಾಪ್ ಬದಲಿಗೆ ನಗದು ಬಹುಮಾನ ನೀಡಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಪ್ರತಿ ಜಿಲ್ಲೆಯಲ್ಲಿ ಅಗ್ರ ಸ್ಥಾನ ಪಡೆದ ಟಾಪ್ -೩ ವಿದ್ಯಾರ್ಥಿಗಳ ಆಧಾರ್ ಲಿಂಕ್ ಖಾತೆಗೆ ನೇರನಗದು ವರ್ಗಾವಣೆ ಮಾಡಲಾಗಿದೆ.



ಪ್ರತಿ ಟಾಪರ್ ವಿದ್ಯಾರ್ಥಿಗೆ ನಗದು ಬಹುಮಾನ:₹50000

ಸರ್ಕಾರದ ಈ ಹೊಸ ನಿರ್ಧಾರವು ವಿದ್ಯಾರ್ಥಿಗಳಿಗೆ ನೇರ ಆರ್ಥಿಕ ನೆರವು ನೀಡುವುದರ ಜೊತೆಗೆ ಅದರ ಮುಂದಿನ ಅಧ್ಯಯನ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಶಿಕ್ಷಣ ಅಗತ್ಯಗಳಿಗೆ ಸಹಾಯವಾಗಲಿದೆ ಶಿಕ್ಷಣ ಇಲಾಖೆ ಹೇಳಿದ್ದು ಈ ಕ್ರಮದಿಂದ ವಿದ್ಯಾರ್ಥಿಗಳ ಪ್ರೋತ್ಸಾಹ ಹೆಚ್ಚಾಗಲಿದೆ ಮತ್ತು ಶೈಕ್ಷಣಿಕ ಸಾಧನೆಗಳಿಗೆ ಪ್ರೋತ್ಸಾಹ ನೀಡಲಾಗುವುದು.



ಮುಖ್ಯ ಹೈಲೈಟ್ಸ್:
ಎಸ್ ಎಸ್ ಎಲ್ ಸಿ ಟಾಪರ್ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬದಲು ನಗದು ಬಹುಮಾನ.
ಪ್ರತಿ ಜಿಲ್ಲೆ: ಟಾಪ್ - ೩ ವಿದ್ಯಾರ್ಥಿಗಳಿಗೆ ನಗದು ಬಹುಮಾನ.
ನಗದು ಮೊತ್ತ: ಪ್ರತಿ ವಿದ್ಯಾರ್ಥಿಗೆ ₹50,000
ನಗದು ವರ್ಗಾವಣೆ : ಆಧಾರ್ ಲಿಂಕ್ಡ್ ಬ್ಯಾಂಕ್ ಖಾತೆಗೆ ನೇರವಾಗಿ



2024 25ನೇ ಶೈಕ್ಷಣಿಕ ವರ್ಷದಲ್ಲಿ 758 ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ SSP ಮೂಲಕ ನಗದು ಬಹುಮಾನಕ್ಕೆ ಅರ್ಹರಾಗಿದ್ದಾರೆ ಸರ್ಕಾರ ಈ ನಗದು ಬಹುಮಾನವನ್ನು ವಿದ್ಯಾರ್ಥಿಗಳ ಆಧಾರ ಲಿಂಕ್ಡ್ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡಲಿದ್ದು ಎಲ್ಲಾ ಪ್ರಕ್ರಿಯೆಗಳು ಸುಗಮಗೊಳಿಸಲಾಗಿದೆ.



ಗುಣಮಟ್ಟದ ಭರವಸೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಉಪಕ್ರಮ ಯೋಜನೆ ಅಡಿಯಲ್ಲಿ ಈ ಯೋಜನೆಗೆ ಸುಮಾರು 325 ಲಕ್ಷ ರೂಪಾಯಿಗಳನ್ನು ಮೀಸಲಿಡಲಾಗಿದೆ. ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಈ ಕ್ರಮದಿಂದ ವಿದ್ಯಾರ್ಥಿಗಳಿಗೆ ನೇರ ಆರ್ಥಿಕ ನೆರವು ದೊರೆಯುವ ಜೊತೆಗೆ ಅವರ ಶಿಕ್ಷಣದಲ್ಲಿ ಪ್ರೋತ್ಸಾಹ ಹೆಚ್ಚಾಗಲಿದೆ.



ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಈ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಆನಂತರ ಸರ್ಕಾರ ಇದೀಗ ಆದೇಶ ಹೊರಸಿದೆ ತಮಗೆ ದೊರೆತ ಬಹುಮಾನವನ್ನು ಹೇಗೆ ಬೆಳೆಸಿಕೊಳ್ಳಬೇಕೆಂಬ ಸ್ವಾತಂತ್ರ್ಯ ವಿದ್ಯಾರ್ಥಿಗಳಿಗೆ ನೀಡಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲ್ಯಾಪ್ಟಾಪ್ ನೀಡುವ ಬದಲು ನಗದು ಬಹುಮಾನ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆ ಮತ್ತು ಪ್ರಯೋಜನ ದೊರಕಲಿದೆ ಎಂದು ಶಾಲಾ ಹಾಗೂ ಶಿಕ್ಷಣಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.


ಇನ್ನಷ್ಟು ಓದಿರಿ:


ಹುಬ್ಬಳ್ಳಿಯ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ದುರಂತ : ಮನೆ ಕಟೌಟ್ ಬಿದ್ದು ಅವಾಂತರ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online