<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ : ಪ್ರಮುಖ ಅಭ್ಯರ್ಥಿಗಳ ಜಯ

ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ : ಪ್ರಮುಖ ಅಭ್ಯರ್ಥಿಗಳ ಜಯ
Summary: ಡಿಸಿಸಿ ಬ್ಯಾಂಕ್ 2026 ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಿ.ಟಿ.ರವಿ ಮತ್ತು ಎಸ್.ಎಲ್.ಬೋಜೆಗೌಡ ಪ್ರಮುಖ ಸ್ಥಾನಗಳಿಗೆ ಜಯಶೀಲರಾಗಿದ್ದಾರೆ. ಈ ಫಲಿತಾಂಶವು ಬ್ಯಾಂಕ್ ನಿರ್ವಹಣೆ, ಸದಸ್ಯರ ನಿರ್ಧಾರ ಮತ್ತು ಪ್ರಾದೇಶಿಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಪ್ರಭಾವ ತೋರುವಂತೆ ನಿರೀಕ್ಷಿಸಲಾಗಿದೆ.
Belagavi news:
ಚಿಕ್ಕಮಗಳೂರು ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕ್ (DCC) ೨೦೨೬ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಈ ಚುನಾವಣೆಯಲ್ಲಿ MLCಗಳಾದ ಸಿಟಿ ರವಿ ಮತ್ತು ಎಸ್ ಎಲ್ ಭೋಜೇಗೌಡ ಪ್ರಮುಖ ಸ್ಥಾನಗಳಿಗೆ ಜಯ ಸಾಧಿಸಿದ್ದಾರೆ. ಈ ಫಲಿತಾಂಶದಿಂದ ಬ್ಯಾಂಕ್ ನಿರ್ವಹಣೆ ಮತ್ತು ಪ್ರಾದೇಶಿಕ ಸಹಕಾರ ಕ್ಷೇತ್ರದಲ್ಲಿ ಹೊಸ ಪ್ರಭಾವ ಮೂಡಲಿದೆ. ಸದಸ್ಯರು ಮತ್ತು ಸಾರ್ವಜನಿಕರಿಂದ ಈ ಫಲಿತಾಂಶಕ್ಕೆ ತೀವ್ರ ಪ್ರತಿಕ್ರಿಯೆ ಬಂದಿದೆ. ಆಯ್ಕೆಯಾಗಿದ್ದ ಇವರು ಬ್ಯಾಂಕ್ ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
Dcc ಬ್ಯಾಂಕ್ ಅಥವಾ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಮತ್ತು ಎಸ್.ಎಲ್. ಭೋಜೇಗೌಡ ಭರ್ಜರಿ ಜಯ ಸಾಧಿಸಿದ್ದಾರೆ. ಸಿ.ಟಿ.ರವಿ 27 ಮತಗಳನ್ನು ಮತ್ತು ಎಸ್.ಎಲ್.ಭೋಜೆಗೌಡ 30 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ರೆಬಲ್ ಅಭ್ಯರ್ಥಿ ನಿರಂಜನ್ ಗೆ ಕೇವಲ ೫ ಮತಗಳಷ್ಟೇ ಸಿಕ್ಕಿವೆ. ವಟ್ಟು 13 ನಿರ್ದೇಶಕರ ಸ್ಥಾನಗಳಲ್ಲಿ 8 ಸ್ಥಾನವು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಐದು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಒಟ್ಟು 13 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಬಿಜೆಪಿ ಮತ್ತು ೨ ಸ್ಥಾನಗಳನ್ನು ಜೆಡಿಎಸ್ ಗೆದ್ದಿದೆ. ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಅನುಭವಿಸಿದೆ.
ಈ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಚಿಕ್ಕಮಗಳೂರು ನಗರದಲ್ಲಿನ ಡಿಸಿಸಿ ಬ್ಯಾಂಕ್ ಮುಂದೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯನ್ನು ನಡೆಸಿದರು. ಅದ್ದೂರಿಯಾಗಿ ಸಂಭ್ರಮಾಚರರಣೆ ನಡೆಯಿತು.ಚುನಾವಣೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕಡೂರಿನ ಕೆ.ಎಸ್.ಆನಂದ್ ಅವರಿಗೆ ಭಾರಿ ಸೋಲು ಸಂಭವಿಸಿದೆ. ಕೊಪ್ಪದ ಬಿಜೆಪಿ ಮುಖಂಡ ದಿನೇಶ್ ಹೊಸೂರು ವಿರುದ್ಧ ಪರಾಭವಗೊಂಡಿದ್ದಾರೆ. ವ್ಯವಸಾಯೋತ್ಪನ್ನ ಸಹಕಾರ ಸಂಘದಿಂದ ಸ್ಪರ್ಧಿಸಿದ್ದ ಕೆ. .ಎಸ್.ಆನಂದ್ ಅವರ ಸೋಲು ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರವಾಗಿ ಚರ್ಚೆಗೆ ಕಾರಣವಾಗಿದ್ದು, ಜಿಲ್ಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದರೂ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿರುವುದು ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಬಹುದು.

ಮೂಡಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಅವರು ಚಿಕ್ಕಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಪ್ರಾರ್ಥಿತ ಸ್ಥಾನವನ್ನು ಪಡೆಯಲು ಸಾಧ್ಯವಾಗದೆ ಸೋಲನ್ನು ಅನುಭವಿಸಿದರು. ಅವರು ಪ್ರಾಥಮಿಕ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳ ಸಹಕಾರ ಸಂಘದಿಂದ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಪ್ರಮುಖ ರಾಜಕೀಯ ಮುಖಂಡರೇ ಸ್ಪರ್ಧಿಸುತ್ತಿರುವುದರಿಂದ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗುತ್ತಿದ್ದ ಕ್ಷಣದಿಂದಲೇ ಹೆಚ್ಚಿನ ಕುತೂಹಲ ಮೂಡಿಸುತು.
ಚಿಕ್ಕಮಂಗಳೂರು ಡಿಸಿಸಿ ಬ್ಯಾಂಕ್ ನಡೆಯಲಾದ ಮತ ಎಣಿಕೆ ವೇಳೆ ಪ್ರತಿಯೊಂದು ಮತ್ತು ಸೂಕ್ಷ್ಮವಾಗಿ ಪರಿಶೀಲಿಸಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಪರಾಜಯ ಕಂಡಿದ್ದಾರೆ. ಕ್ಷೇತ್ರಿಯ ರಾಜಕೀಯ ಪರಂಪರೆ, ನಿಷ್ಠುರ ಸ್ಪರ್ಧಾತ್ಮಕ ಪರಿಸ್ಥಿತಿ ಹಾಗೂ ವಿವಿಧ ಪಕ್ಷಗಳ ಅಭ್ಯರ್ಥಿಗಳ ಘರ್ಷಣೆ ಚುನಾವಣೆಯನ್ನು ಹೆಚ್ಚು ಕೌತುಕರ ಮತ್ತು ಗಮನಹಾರ್ವನ್ನಾಗಿ ಮಾಡಿತು.

ಈ ಸೋಲು ಮುಖ್ಯಮಂತ್ರಿ ಎಂಪಿ ಕುಮಾರಸ್ವಾಮಿಯವರು ರಾಜಕೀಯ ಬರವನ್ನು ಕಡಿಮೆ ಮಾಡುತ್ತದೆಯೇ ಎಂಬ ಪ್ರಶ್ನೆಗಳು ಪ್ರತಿಪಾದಿಸಿದ್ದು, ಮುಂದಿನ ಚುನಾವಣಾ ಕಾರ್ಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿನ ಹಲವಾರು ಪ್ರಾಥಮಿಕ ಸಹಕಾರಿ ಬ್ಯಾಂಕ್ ಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆಲುವು ಸಾಧಿಸಿರುವುದರಿಂದ ಈ ಫಲಿತಾಂಶದಿಂದ ಕೇಂದ್ರ ಮತ್ತು ರಾಜ್ಯಮಟ್ಟದ ರಾಜಕೀಯ ಸ್ಥಿತಿ ಮೇಲೆ ಹೆಚ್ಚಾದ ಗಮನ ಹರಿಸಿದೆ. ಇನ್ನು ಚುನಾವಣೆ ಫಲಿತಾಂಶ ಸ್ಥಳೀಯ ರೈತ ಸಂಘಗಳು ಉದ್ಯಮಿಗಳ ಸಂಘಟನೆಗಳು ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳಲ್ಲಿ ಪಕ್ಷಿಯ ಪ್ರಭಾವವನ್ನು ಹೆಚ್ಚಿಸುವ ಸಾಧ್ಯತೆಯನ್ನು ಸ್ಪಷ್ಟಿಸಲಿದೆ.
ಈ ಚುನಾವಣಾ ಫಲಿತಾಂಶ ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಚಿತ್ರಣವನ್ನು ಸ್ಪಷ್ಟವಾಗಿ ಬದಲಿಸಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ರಾಜಕೀಯ ಸ್ಥಿತಿಗೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯನ್ನು ತೋರಿಸುತ್ತದೆ. ಜಿಲ್ಲೆಯ ರಾಜಕೀಯ ತಂತ್ರಗಳು ಪಕ್ಷಗಳ ಪ್ರಭಾವ ಮತ್ತು ಸಾರ್ವಜನಿಕ ಅಭಿಪ್ರಾಯಕ್ಕೆ ಈ ಫಲಿತಾಂಶ ಪ್ರಮುಖ ಸಂಕೇತವಾಗಿದೆ ಎಂದು ಹೇಳಬಹುದು. ಬಂದಿರುವ ಫಲಿತಾಂಶದಂತೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು 13 ನಿರ್ದೇಶಕ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಬಿಜೆಪಿ ಗೆದ್ದು ೨ ಸ್ಥಾನಗಳನ್ನು ಜೆಡಿಎಸ್ ಗೆ ಪಡೆಯಲಾಗಿದೆ. ಇದರಿಂದ ಬಿಜೆಪಿಯ ಎಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಪ್ರಮುಖ ಸ್ಥಾನವನ್ನು ತಾಳಮೇಳದಿಂದ ನಿರ್ವಹಿಸಲಿದೆ. ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಯಾರು ಆಗುತ್ತಾರೆ ಎಂದು ಮುಂದಿನ ದಿನಗಳಲ್ಲಿ ನಿರ್ಧಾರವಾಗಲಿದೆ.
ಮುಂದಿನ ತಾಲೂಕು ಪಂಚಾಯತ ಗ್ರಾಮ ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಚುನಾವಣೆಯ ಮೇಲೆ ಈ ಫಲಿತಾಂಶ ಹೇಗೆ ಪ್ರಭಾವ ಬೀರುದೆಂಬುದನ್ನು ಮುಂದಿನ ದಿನಗಳಲ್ಲಿ ಗಮನಿಸಬೇಕು. ಈ ಸಂದರ್ಭದಲ್ಲಿ ಜಿಲ್ಲಾ ರಾಜಕೀಯ ನಿಲ್ಲುವವೂ ಪಕ್ಷಗಳ ಮೈತ್ರಿ ಹಾಗೂ ಸಂಘಟನೆ ಸಾಮರ್ಥ್ಯವು ಮುಂದಿನ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಫಲಿತಾಂಶ ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ಭೂ ದೃಶ್ಯವನ್ನು ಸಂಪೂರ್ಣವಾಗಿ ಒದಲಿಸುವ ಸೂಚಕವಾಗಿದೆ ಮತ್ತು ಭಾಗವಹಿಸಿದ ಎಲ್ಲಾ ಪಕ್ಷಗಳು ಮುಂದಿನ ಕ್ರಮಗಳಿಗೆ ಮಾರ್ಗದರ್ಶಕವಾಗಲಿದೆ ಎಂದು ಹೇಳಬಹುದು.

ಇನ್ನಷ್ಟು ಓದಿರಿ:
ಒಂದು ಎಕರೆ ಸ್ಟ್ರಾಬೆರಿ ಕೃಷಿ ಲಕ್ಷಾಂತರ ರೂಪಾಯಿ ಗಳಿಕೆ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online