Belagavi News :
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಂಜೆ ದೆಹಲಿ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣಾ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ರಾಜ್ಯದ ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ.
ಸಂಸದರನ್ನು ಒಗ್ಗೂಡಿಸಿ ರಾಜ್ಯದ ಹಿತಾಸಕ್ತಿಗಾಗಿ ಕೇಂದ್ರದ ಮೇಲೆ ಒತ್ತಡ ತರಲು ಮನವಿ ಮಾಡಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ. ಬಳಿಕ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ಭವನದಲ್ಲಿ ಸಿಎಂ ಡಿಕೆಶಿ ಮಹತ್ವದ ಸಭೆ - ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಯೋಜನೆಗಳ ಕುರಿತು ಚರ್ಚೆ :
ಸಂಸತ್ ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಸಂಜೆ ಆರು ಮೂವತ್ತಕ್ಕೆ ನಡೆಯಲಿರುವ ಈ ಸಭೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರಿಗೆ ಆಹ್ವಾನ ನೀಡಲಾಗಿದೆ.
ರಾಜ್ಯಕ್ಕೆ ಸಂಬಂಧಿಸಿದ ಬಾಕಿ ಉಳಿದಿರುವ ಯೋಜನೆಗಳು, ಕೇಂದ್ರ ಸರ್ಕಾರದಿಂದ ಬಾಕಿ ಇರುವ ಅನುದಾನ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ರಾಜ್ಯದ ಪ್ರಮುಖ ಬೇಡಿಕೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಪಕ್ಷ ಭೇದ ಮರೆತು ರಾಜ್ಯದ ಹಿತಾಸಕ್ತಿಗಾಗಿ ಸಂಸದರು ಒಗ್ಗೂಡಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಕೇಂದ್ರದ ಮುಂದೆ ರಾಜ್ಯದ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಪರಿಣಾಮಕಾರಿಯಾಗಿ ಮಂಡಿಸುವ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂಸದ ರಿಂದ ಅಭಿಪ್ರಾಯ ಪಡೆಯಲಿದ್ದಾರೆ.
ಸಂಸತ್ ಅಧಿವೇಶನದ ವೇಳೆ ಕರ್ನಾಟಕದ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಪ್ರಸ್ತಾಪಿಸುವುದು, ಕೇಂದ್ರದ ಗಮನ ಸೆಳೆಯುವುದು ಹಾಗೂ ರಾಜ್ಯಕ್ಕೆ ಅಗತ್ಯ ನೆರವು ಪಡೆಯುವ ಕುರಿತು ಸಭೆಯಲ್ಲಿ ತಂತ್ರ ರೂಪಿಸುವ ನಿರೀಕ್ಷೆ ಇದೆ.
ಸಚಿವ ಸಂಪುಟ ವಿಸ್ತರಣೆ ಯಾವಾಗ ? ಈ ವಾರದೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂ :
ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಸಿಎಂ, ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಚರ್ಚೆಗಳು ನಡೆಯುತ್ತಿದ್ದು, ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ಕೈಗೊಳ್ಳುವ ಸಾಧ್ಯತೆ ಇದೆ. ದೆಹಲಿ ಭೇಟಿ ವೇಳೆ ಹೈಕಮಾಂಡ್ ನಾಯಕರೊಂದಿಗೆ ಈ ವಿಚಾರ ಚರ್ಚೆ ನಡೆಸುವ ನಿರೀಕ್ಷೆಯು ಇದೆ.
ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಹಲವು ದಿನಗಳಿಂದ ಚರ್ಚೆಯಲ್ಲಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳಲ್ಲೂ ಕುತೂಹಲ ಹೆಚ್ಚಾಗಿದೆ. ಸಂಪುಟಕ್ಕೆ ಯಾರಿಗೆ ಅವಕಾಶ ಸಿಗಲಿದೆ ಎಂಬುವುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
ಮುಖ್ಯಮಂತ್ರಿಗಳ ಹೇಳಿಕೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ವೇಗ ಪಡೆಯುವ ನಿರೀಕ್ಷೆ ಮೂಡಿದ್ದು, ಕಾಂಗ್ರೆಸ್ ಶಾಸಕರ ಗಮನ ಇದೀಗ ಹೈಕಮಾಂಡ್ ನಿರ್ಧಾರದತ್ತ ನೆಟ್ಟಿದೆ.