<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಭಾರತದ ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇಂದು ಬೆಳಗ್ಗೆ ಭೂಕಂಪನ

ಭಾರತದ ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇಂದು ಬೆಳಗ್ಗೆ ಭೂಕಂಪನ
Summary: ಗುವಾಹಟಿಯ ಅಸ್ಸಾಂನ ಮಧ್ಯಭಾಗದಲ್ಲಿಂದು ಬೆಳ್ಳಂ ಬೆಳಿಗ್ಗೆ ಭೂಕಂಪ ಸಂಭವಿಸಿದೆ. ಯಾವುದೇ ರೀತಿಯಾದಂತಹ ಸಾವುಗಳು ಸಂಭವಿಸಿಲ್ಲ ಎಂಬುವುದೇ ಸಮಾಧಾನಕರ ವಿಷಯವಾಗಿದೆ.
BELAGAVI NEWS : ಭಾಗೀರಥಪುರದಲ್ಲಿ ನಡೆಯುತ್ತಿರುವ ಸಮೀಕ್ಷೆಯ ಸಂದರ್ಭದಲ್ಲಿ ಆರೋಗ್ಯ ತಂಡಗಳು 2,354 ಮನೆಗಳಿಂದ 9,416 ಜನರನ್ನು ಪರೀಕ್ಷೆಗೆ ಒಳಪಡಿಸಿವೆ. ಈವರೆಗೆ 398 ರೋಗಿಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರಲ್ಲಿ 256 ರೋಗಿಗಳು ಚೇತರಿಸಿಕೊಂಡಿದ್ದು, ಬಿಡುಗಡೆ ಮಾಡಲಾಗಿದೆ. ಇದೀಗ ಸೋಂಕು ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಮಾಧವ್ ಪ್ರಸಾದ್ ಹಸಾನಿ ಅವರು ಮಾತನಾಡಿ, "ಇಂದೋರ್​ನ ಆರೋಗ್ಯ ಬಿಕ್ಕಟ್ಟಿನ ಬಗ್ಗೆ ತನಿಖೆ ನಡೆಸಲು ಕೋಲ್ಕತ್ತಾದ ರಾಷ್ಟ್ರೀಯ ಬ್ಯಾಕ್ಟೀರಿಯಾ ಸೋಂಕು ಸಂಶೋಧನಾ ಸಂಸ್ಥೆಯ (ಎನ್‌ಐಆರ್‌ಬಿಐ) ತಂಡ ನಗರಕ್ಕೆ ಆಗಮಿಸಿದೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ತಜ್ಞರ ತಂಡ ಆರೋಗ್ಯ ಇಲಾಖೆಗೆ ತಾಂತ್ರಿಕ ಬೆಂಬಲ ನೀಡುತ್ತಿದೆ" ಎಂದು ಮಾಹಿತಿ ನೀಡಿದರು. ಕಳೆದ ಎಂಟು ತಿಂಗಳಿನಿಂದ ಭಾಗೀರಥಪುರದ ನಿವಾಸಿಗಳು ಪುರಸಭೆಯ ನಲ್ಲಿ ಸಂಪರ್ಕಗಳಿಂದ ಕಲುಷಿತ ನೀರು ಬರುತ್ತಿದೆ ಎಂದು ದೂರು ನೀಡುತ್ತಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಭಾಗೀರಥಪುರದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಅದೂ ಕೂಡ ಕಲುಷಿತವಾಗಿದೆ ಎಂದು ಆರೋಪಿಸಿದರು.
ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ವಿಷಾಹಾರ ಸೇವಿಸಿ ಕನಿಷ್ಠ 200 ಗಿಳಿಗಳು ಸಾವನ್ನಪ್ಪಿದ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿತ್ತು. ಬದ್ವಾ ಪ್ರದೇಶದ ನದಿ ದಂಡೆಯಲ್ಲಿರುವ ಸೇತುವೆಯ ಸಮೀಪ ನಾಲ್ಕು ದಿನಗಳಲ್ಲಿ ಇಷ್ಟು ಪ್ರಮಾಣದ ಗಿಳಿಗಳು ಸಾವನ್ನಪ್ಪಿದ್ದವು. ಇದಕ್ಕೆ ಹಕ್ಕಿ ಜ್ವರ ಕಾರಣ ಎಂದು ಮೊದಲಿಗೆ ಶಂಕಿಸಲಾಗಿತ್ತು. ಆದರೆ, ಮೃತಪಟ್ಟ ಗಿಳಿಗಳ ಕಳೇಬರಗಳ ಮರಣೋತ್ತರ ಪರೀಕ್ಷೆ ನಡೆಸಿದಾಗ ಅವುಗಳ ಸಾವಿಗೆ ವಿಷ ಪ್ರಾಶನ ಕಾರಣವಾಗಿದೆ ಎಂಬುದು ದೃಢಪಟ್ಟಿತ್ತು. ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವು ಗಿಳಿಗಳು ಜೀವಂತ ಇದ್ದವು. ಆದರೆ, ಆಹಾರದಲ್ಲಿನ ವಿಷ ಪ್ರಮಾಣ ತೀವ್ರವಾಗಿದ್ದ ಕಾರಣ ಅವು ಬದುಕಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವನ್ಯಜೀವಿ ವಾರ್ಡನ್​ ಟೋನಿ ಶರ್ಮಾ ತಿಳಿಸಿದ್ದರು.ಕಲುಷಿತ ನೀರು ಸೇವಿಸಿ 10 ಮಂದಿ ಸಾವನ್ನಪ್ಪಿದ ಬಳಿಕ ಮತ್ತೆ ಇಂದೋರ್​ನಲ್ಲಿ ಅತಿಸಾರ ಪ್ರಕರಣಗಳು ದಾಖಲಾಗಿವೆ. ಇದೀಗ 142 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 11 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾಗೀರಥಪುರ ಪ್ರದೇಶದಲ್ಲಿ 9,000ಕ್ಕೂ ಹೆಚ್ಚು ಜನರನ್ನು ತಪಾಸಣೆ ಮಾಡಿದ್ದು, 20 ಹೊಸ ರೋಗಿಗಳು ಪತ್ತೆಯಾಗಿದ್ದಾರೆ.
ಇನ್ನಷ್ಟು ಓದಿರಿ : ಜನವರಿ 11ರಂದು ‘ಸೋಮನಾಥ ಸ್ವಾಭಿಮಾನ್ ಪರ್ವ’ ಪ್ರಧಾನಿ ಮೋದಿ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online