<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಅನಧಿಕೃತ ದುರ್ನಡತೆ ಆರೋಪ : ಹೈಕೋರ್ಟ್ ರದ್ದು

ಅನಧಿಕೃತ ದುರ್ನಡತೆ ಆರೋಪ : ಹೈಕೋರ್ಟ್ ರದ್ದು
Summary: BMTC ಚಾಲಕನ ವಿರುದ್ಧ ಅನಧಿಕೃತ ಗೈರು ದುರ್ನಡತೆ ಆರೋಪದ ಹಿನ್ನೆಲೆಯಲ್ಲಿ ಮಾಡಿದ ವಜಾ ಕ್ರಮವನ್ನು ಹೈಕೋರ್ಟ್ ರದ್ದು ಮಾಡಿದೆ. labor rights ಮತ್ತು accountability ಬಗ್ಗೆ ಅರಿವು ಪಡೆಯಿರಿ.
belagavi news :

ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ (BMTC) ಚಾಲಕನ ವಿರುದ್ಧ ಅನಧಿಕೃತ ಗೈರು ದುರ್ನಡತೆ ಆರೋಪದ ಹಿನ್ನೆಲೆ ತೆಗೆದುಕೊಂಡ ವಜಾ ಕ್ರಮವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ಈ ತೀರ್ಪು ನಗರ ಸಾರಿಗೆ ಸಿಬ್ಬಂದಿ ಮತ್ತು ಲೇಬರ್ ಹಕ್ಕುಗಳ ಮೇಲೆ ಮಹತ್ವದ ಪರಿಣಾಮ ಬೀರುತ್ತಿದೆ.

BMTC ಚಾಲಕನು ಸೇವೆಯ ಸಂದರ್ಭದಲ್ಲಿ alleged misconduct ಅಥವಾ “non-compliance” ಆರೋಪಕ್ಕೆ ಒಳಗಾದದ್ದು. ಅಧಿಕಾರಿಗಳು ತಕ್ಷಣವೇ ವಜಾ ಕ್ರಮ ಕೈಗೊಂಡಿದ್ದಾರೆ.

Employee ವಜಾ ಕ್ರಮವು ನ್ಯಾಯಾಲಯದ ಮೆಟ್ಟಿಲುಗಳಲ್ಲಿ ಪ್ರಶ್ನೆಗೆ ಒಳಗಾಗಿದೆ. ರಜೆ ಇಲ್ಲದೆ ಕೆಲಸಕ್ಕೆ ಅನಧಿಕೃತವಾಗಿ ಗೈರಾಗುವುದು ದುರ್ನಡತೆಯಾಗಲಿದ್ದು, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ತರಬೇತಿಯಲ್ಲಿದ್ದು, ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಅವರನ್ನು ಸೇವೆಯಿಂದ ತೆಗೆದುಹಾಕಿದ್ದ ಆದೇಶ ರದ್ದುಪಡಿಸಿದ ಕಾರ್ಮಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಇಂದು(ಶುಕ್ರವಾರ) ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜ್ಯೋತಿ ಅವರಿದ್ದ ನ್ಯಾಯಪೀಠ, ಪೂರ್ವಾನುಮತಿ ಮತ್ತು ರಜೆ ಪಡೆಯದೆ ವೆಂಕಟೇಶಯ್ಯ 2016ರ ಡಿ.1ರ ನಂತರ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದಾರೆ. ಈ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಶಿಸ್ತು ಪ್ರಾಧಿಕಾರವು ಸೇವೆಯಿಂದ ವೆಂಕಟೇಶಯ್ಯ ಅವರನ್ನು ವಜಾಗೊಳಿಸಿದೆ. ಉದ್ಯೋಗ ನಿರ್ವಹಣೆ ಮಾಡುವ ಸಮಯದಲ್ಲಿ ಸಕಾರಣವಿಲ್ಲದೆ ಉದ್ಯೋಗಕ್ಕೆ ನೌಕರ ಅನಧಿಕೃತವಾಗಿ ಗೈರಾಗಬಾರದು. ರಜೆಯಿಲ್ಲದೆ ಉದ್ಯೋಗಕ್ಕೆ ಗೈರಾಗುವುದು ದುರ್ನಡತೆಗೆ ಸಮ. ದುರ್ನಡತೆಯು ಶಿಸ್ತು ಕ್ರಮವನ್ನು ಸಮರ್ಥಿಸುತ್ತದೆ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ, ಯಾವುದೇ ಉದ್ಯೋಗಿ ಗೈರುಹಾಜರಿಯ ರಜೆಯನ್ನು ಒಂದು ಹಕ್ಕು ಆಗಿ ಕ್ಲೇಮು ಮಾಡಲಾಗದು. ರಜೆ ಇಲ್ಲದೆ ಉದ್ಯೋಗಕ್ಕೆ ಗೈರಾಗುವುದು ಶಿಸ್ತಿನ ಉಲ್ಲಂಘನೆಯಾಗುತ್ತದೆ. ಈ ಪ್ರಕರಣದಲ್ಲಿ ಉದ್ಯೋಗಿ ಅನಧಿಕೃತವಾಗಿ ನೌಕರಿಗೆ ಗೈರಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ವೆಂಕಟೇಶಯ್ಯಗೆ ಶಿಕ್ಷೆ ನೀಡಲಾಗಿದೆ. ಆದರೆ, ನೌಕರನು ದೀರ್ಘಾವಧಿ ಸೇವೆ ಸಲ್ಲಿಸಿದ್ದಾನೆ ಎಂಬ ಆಧಾರದಲ್ಲಿ ಶಿಕ್ಷೆಯನ್ನು ಕಾರ್ಮಿಕ ನ್ಯಾಯಾಲಯವು ರದ್ದುಪಡಿಸಿದೆ.

ದೀಘಾವಧಿ ಸೇವೆಯು ದುರ್ನಡತೆಯನ್ನು ಕ್ಷಮಿಸುವ ಮಾನದಂಡವಲ್ಲ ಎಂದು ಪೀಠ ಹೇಳಿತು. ವೆಂಕಟೇಶಯ್ಯ ಶ್ರದ್ಧೆಯಿಂದ ಕೆಲಸ ಮಾಡುವಂತಹ ಆಸಕ್ತಿ ಹೊಂದಿರಲಿಲ್ಲ. ಶ್ರದ್ದೆಯಿಂದ ಕೆಲಸ ಮಾಡದ ಉದ್ಯೋಗಿಗೆ ಯಾವುದೇ ಸಹಾನುಭೂತಿ ತೋರುವ ಅಗತ್ಯವಿಲ್ಲ.

ಸಹಾನೂಭೂತಿ ತೋರುವುದು ತಪ್ಪಾಗುತ್ತದೆ. ಹಾಗಾಗಿ, ವೆಂಕಟೇಶಯ್ಯ ಅವರನ್ನು ಸೇವೆಯಿಂದ ವಜಾಗೊಳಿಸಿ ಬಿಎಂಟಿಸಿ 2018ರಂದು 29ರಂದು ಹೊರಡಿಸಿದ ಆದೇಶದಲ್ಲಿ ಯಾವುದೇ ದೋಷವಿಲ್ಲ ಎಂದು ತಿಳಿಸಿರುವ ನ್ಯಾಯಪೀಠ, ಅರ್ಜಿಯನ್ನು ಪುರಸ್ಕರಿಸಿ ಆದೇಶಿಸಿತು.

ಈ ಪ್ರಕರಣಕ್ಕೆ ಭಿನ್ನವಾಗಿ ನೌಕರರಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕೋರ್ಟ್ ನೌಕರರ ಹಕ್ಕು ಪರ ವಾದ ಮಂಡಿಸಿತ್ತು.​ ನೌಕರರ ರಜೆ ನಗದು ಪಾವತಿಗೆ ವಿಳಂಬ ಮಾಡಿರುವುದರಿಂದ ಅದಕ್ಕೆ ಪರಿಹಾರ ಪಡೆಯುವ ಹಕ್ಕು ನೌಕರರಿಗಿದೆ ಎಂದು ಹೈಕೋರ್ಟ್ ತಿಳಿಸಿತ್ತು.

ಸಾರಿಗೆ ನೌಕರರ ರಜೆ ನಗದೀಕರಣ (ಇಎಲ್) ಪಾವತಿಯಲ್ಲಿ ವಿಳಂಬ ಮಾಡಿದ ಪರಿಣಾಮ ಶೇ.6ರಷ್ಟು ಬಡ್ಡಿ ಸೇರಿಸಿ ಮುಂದಿನ 12 ವಾರಗಳಲ್ಲಿ ಪಾವತಿ ಮಾಡಬೇಕು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ ಡಬ್ಲ್ಯೂಕೆಆರ್‌ಟಿಸಿ)ಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

ಇನ್ನಷ್ಟು ಓದಿರಿ :
ಅತ್ಯಧಿಕ Antibiotics ಸೇವನೆಯ ಅಪಾಯ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online